ಸುಳ್ಯ: ಹಾಡುಹಗಲೇ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ಬರ್ಬರ ಹತ್ಯೆ

ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ಎಂಬುವರನ್ನು ಹಾಡುಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸುಳ್ಯದ ಐವರ್ನಾಡಿನಲ್ಲಿ...
ಇಸ್ಮಾಯಿಲ್
ಇಸ್ಮಾಯಿಲ್
Updated on
ಸುಳ್ಯ: ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ಎಂಬುವರನ್ನು ಹಾಡುಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸುಳ್ಯದ ಐವರ್ನಾಡಿನಲ್ಲಿ ನಡೆದಿದೆ. 
ಪ್ರಾರ್ಥನೆ ಮುಗಿಸಿ ಮಸೀದಿಯಿಂದ ಹೊರ ಬರುತ್ತಿದ್ದ ಇಸ್ಮಾಯಿಲ್ ಅವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ. ಕತ್ತಿನ ಭಾಗಕ್ಕೆ ತೀವ್ರವಾದ ಗಾಯವಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 
ಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 
ಎರಡು ವರ್ಷದ ಹಿಂದೆಯೂ ಸುಳ್ಯದ ಗಾಂಧಿನಗರದಲ್ಲಿ ಇಸ್ಮಾಯಿಲ್ ಮೇಲೆ ಹತ್ಯೆ ಪ್ರಯತ್ನ ನಡೆದಿತ್ತು. ಬಳಿಕ ಅವರಿಗೆ ಗನ್ ಮ್ಯಾನ್ ನೀಡಲಾಗಿತ್ತು. ಇಂದು ಪ್ರಾರ್ಥನೆಗೆ ತೆರಳಿದ್ದ ಇಸ್ಮಾಯಿಲ್ ಅವರ ಜತೆ ಗನ್ ಮ್ಯಾನ್ ಇರಲಿಲ್ಲ ಎಂದು ಹೇಳಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com