ಮೈಸೂರು: ಮರಳು ಅಕ್ರಮ ಸಾಗಾಣೆಗೆ ಲಂಚ ಪಡೆಯುವಂತೆ ಅಧಿಕಾರಿಗಳಿಗೆ ಕುಮ್ಮಕ್ಕು ನೀಡಿದ ಪ್ರಕರಣದಲ್ಲಿ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ್ದರಿಂದ ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಬುಧವಾರ ನ್ಯಾಯಾಲಯಕ್ಕೆ ಶರಣಾದರು.
ವಿಶಷ ನ್ಯಾಯಾಲಯದ ನ್ಯಾಯಾಧೀಶ ಸುಧೀಂದ್ರನಾಥ್ ಎದುರು ಸುನೀಲ್ ಬೋಸ್ ಮಧ್ಯಹ್ನ 12 ಗಂಟೆಗೆ ಶರಣಾದರು. ನಂತರ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದ ವಿಚಾರಣೆಗೆ ಸುನೀಲ್ ಬೋಸ್ ಸತತ 4 ಸಲ ಗೈರಾಗಿದ್ದರು. ಹೀಗಾಗಿ ನಗರದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮಂಗಳವಾರ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿತ್ತು.
Advertisement