ಅವರು, 20,000 ಶಾಲಾ ಕಾಲೇಜುಗಳಲ್ಲಿ ಗಾಂಧಿ ಕುರಿತು ಪ್ರವಚನ ನೀಡಿ ಯುವ ಮನಗಳಿಗೆ ಕ್ರಿಯಾತ್ಮಕ ಆಯಾಮ ಕಟ್ಟಿಕೊಟ್ಟಿದ್ದರು. 200ಕ್ಕೂ ಹೆಚ್ಚು ಗಾಂಧಿ ಅಧ್ಯಯನ ಕೇಂದ್ರಗಳ ಸ್ಥಾಪನೆಗೆ ಕಾರಣರಾಗಿದ್ದಾರೆ. ಸಹಕಾರ ತತ್ವದ ಮೇಲೆ ಸಹಕಾರಿ ಬ್ಯಾಂಕ್ಗಳನ್ನು ಪ್ರಾರಂಭಿಸಿದ್ದರು. ಗಾಂಧೀಜಿಯವರ ಕುರಿತು ಹಲವಾರು ಕೃತಿ ರಚಿಸಿ, ಗಾಂಧಿಜೀಯವರ ಚಿಂತನೆಯನ್ನು ಪೀಳಿಗೆಯಿಂದ ಪೀಳಿಗೆಗೆ ದಾಟಿಸುವ ಕಾರ್ಯ ಮಾಡಿದ್ದರು. ಅವರ ‘ನಾ ಕಂಡ ಜರ್ಮನಿ' ಪುಸ್ತಕ ಶ್ರೇಷ್ಠ ಪ್ರವಾಸ ಕಥನವಾಗಿ, ಪಠ್ಯವಾಗಿ ಸಾಹಿತ್ಯಾಸಕ್ತರ ಗಮನ ಸೆಳೆದಿದೆ.