ಸಂಗಮೇಶ್ವರ ಗ್ರಾಮದಲ್ಲಿ 26 ವರ್ಷಗಳ ನಂತರ ಮಾರಮ್ಮ ದೇವಿ ಹಬ್ಬ ಆಚರಿಸಲಾಗುತ್ತಿತ್ತು. ಈ ವೇಳೆ ದೇವಿಗೆ ಪಲ್ಲಕ್ಕಿ ಉತ್ಸವ ಮಾಡಲಾಗುತ್ತಿತ್ತು. ಗ್ರಾಮದ ಎಲ್ಲಾ ಬೀದಿಗಳಲ್ಲೂ ಪಲ್ಲಕ್ಕಿ ಮೆರವಣಿಗೆ ನಂತರ ವಿಷ್ಣು ಮಾದಾರ್ ಮನೆ ಮುಂದೆ ಉತ್ಸವ ಬಂತು. ಈ ವೇಳೆ ದೇವತಗೆ ಪೂಜೆ ಮಾಡುವಂತೆ ಗ್ರಾಮಸ್ಥರು ಹೇಳಿದ್ದಾರೆ, ಆದರೆ ವಿಷ್ಣು ಮಾದಾರ್ ಇದಕ್ಕೆ ನಿರಾಕರಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಗುಂಪೊಂದು ಆತನನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದೆ. ನಂತರ ಎರಡು ಗುಂಪುಗಳ ನಡುವೆ ಘರ್ಷಣೆ ಆರಂಭವಾಗಿದೆ.