ಸಿವಿಲ್, ಸಿಎಆರ್ ಸಿಬ್ಬಂದಿ ಸಮವಸ್ತ್ರ ಧರಿಸದಿರುವುದು, ಹಿರಿಯ ಅಧಿಕಾರಿಗಳ ಭೇಟಿ ಸಂದರ್ಭದಲ್ಲಿ ಕಿವಿಗೆ ಓಲೆ, ಹಣೆಗೆ ಕುಂಕುಮ ಇಡುವುದು ಮತ್ತು ತಲೆ ಕೂದಲು ಕಟಿಂಗ್ ಮಾಡಿಸದಿರುವುದು, ಕೈಗೆ ಧಾರ ಕಟ್ಟಿಕೊಂಡಿರುವುದು ಗಮನಕ್ಕೆ ಬಂದಿದೆ. ಇದು ಪೊಲೀಸರ ಆಶಿಸ್ತು ತೋರಿಸುತ್ತದೆ. ಈ ಹಿನ್ನೆಲೆಯಲ್ಲಿ ವಿವಿಐಪಿ ಭದ್ರತೆ ವಿಭಾಗದ ಉಪ ಪೊಲೀಸ್ ಆಯುಕ್ತ ಡಿ. ಕಿಶೋರ್ ಬಾಬು ಶಿಸ್ತಿನಿಂದ ಕರ್ತವ್ಯ ನಿರ್ವಹಿಸಬೇಕು ಎಂಬ ಆದೇಶ ಹೊರಡಿಸಿದ್ದಾರೆ.