ಭ್ರಷ್ಟಾಚಾರ ಸೇರಿದಂತೆ ನಾಡಿನ ಸಮಸ್ಯೆಗಳ ವಿರುದ್ಧ ಹೋರಾಟ ಮಾಡುವುದರಲ್ಲಿ ಇಂದಿಗೂ ಮುಂಚೂಣಿಯಲ್ಲಿರುವ ಹೆಚ್ ಎಸ್ ದೊರೆಸ್ವಾಮಿ ಜನಿಸಿದ್ದು ಬೆಂಗಳೂರು ಸಮೀಪದ ಹಾರೋಹಳ್ಳಿಯಲ್ಲಿ 1918 ರ ಏಪ್ರಿಲ್ 10 ರಂದು. ಹೆಚ್ ಎಸ್ ದೊರೆಸ್ವಾಮಿ ಅವರಿಗೆ ನಾಡಿನ ಹಲವು ಗಣ್ಯರು ಜನ್ಮದಿನದ ಶುಭಾಶಯ ಕೋರಿದ್ದು, ಬೆಂಗಳೂರಿನ ಮೇಯರ್ ಜಿ. ಪದ್ಮಾವತಿ, ಉಪಮೇಯರ್ ಆನಂದ್ ಅವರು ದೊರೆಸ್ವಾಮಿ ಅವರನ್ನು ಭೇಟಿ ಮಾಡಿ ಜನ್ಮದಿನದ ಶುಭಾಶಯ ಕೋರಿದ್ದಾರೆ.