ದಲಿತ ನಾಯಕ ಗುರುಪ್ರಸಾದ್ ಕೆರೆಗೋಡುಗೆ ಅಂಬೇಡ್ಕರ್ ಪ್ರಶಸ್ತಿ

2017ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ದಲಿತ ಸಂಘರ್ಷ ಸಮಿತಿ...
ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ರಾಷ್ಟ್ರಪತಿ ಪ್ರಣಬ್ ಮುಖರ್ಜಿ
Updated on
ಬೆಂಗಳೂರು: 2017ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ದಲಿತ ಸಂಘರ್ಷ ಸಮಿತಿ ಸದಸ್ಯ ಗುರುಪ್ರಸಾದ್ ಕೆರೆಗೋಡು ಆಯ್ಕೆಯಾಗಿದ್ದಾರೆ. ನಾಳೆ ನಡೆಯಲಿರುವ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುಪ್ರಸಾದ್ ಅವರಿಗೆ 5  ಲಕ್ಷ ರೂಪಾಯಿ ನಗದು ಬಹುಮಾನ ನೀಡಲಿದ್ದಾರೆ.
ದಲಿತರ ಉದ್ಧಾರಕ್ಕಾಗಿ ಮತ್ತು ಅಂಬೇಡ್ಕರ್ ಅವರ ತತ್ವಗಳನ್ನು ಸಮಾಜದಲ್ಲಿ ಪ್ರಚುರಪಡಿಸುವಲ್ಲಿ ಕೆಲಸ ಮಾಡಿದ ಗುರುಪ್ರಸಾದ್ ಅವರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ ತಿಳಿಸಿದ್ದಾರೆ.
ಈ ವರ್ಷ ಎಸ್ಸಿ, ಎಸ್ಟಿ ಸಮುದಾಯಕ್ಕಾಗಿ ಇರುವ ಅಂಬೇಡ್ಕರ್ ಆವಾಸ್ ವಸತಿ ಯೋಜನೆ ಆರಂಭವಾಗಲಿದೆ. ಗ್ರಾಮೀಣ  ಭಾಗದ ಬಡ ದಲಿತರಿಗೆ  ಸೈಟು ಮತ್ತು 1.75 ಲಕ್ಷ ರೂಪಾಯಿ ಆರ್ಥಿಕ ನೆರವು, ನಗರ ಪ್ರದೇಶಗಳಲ್ಲಿರುವ ದಲಿತರಿಗೆ ಪಕ್ಕಾ ಮನೆ ಕಟ್ಟಲು 2 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ. ಸರ್ಕಾರಿ ಭೂಮಿಯಲ್ಲಿ ಗುಡಿಸಲುಗಳಲ್ಲಿ ವಾಸಿಸುತ್ತಿರುವವರು ಉಚಿತ ವಸತಿಗೆ ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದು ಎಂದು ಆಂಜನೇಯ ತಿಳಿಸಿದರು.
6ನೇ ತರಗತಿಯಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಈ ವರ್ಷದಿಂದ 125 ಅಂಬೇಡ್ಕರ್ ವಸತಿ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಸಹ ಸಚಿವರು ತಿಳಿಸಿದರು.
ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ನಾಳೆ ಬೆಂಗಳೂರಿನಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಮಿಕ್ಸ್ ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com