ಪೊಲೀಸರಿಗೆ ಇನ್ನೂ ಸಿಕ್ಕಿಲ್ಲ ಬಾಂಬ್ ನಾಗನ ಸುಳಿವು: ಜಾಮೀನು ಪಡೆಯಲು ರೌಡಿ ಶೀಟರ್ ಸಿದ್ದತೆ

ತಲೆ ಮರೆಸಿಕೊಂಡಿರುವ ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಹಾಗೂ ರೌಡಿಶೀಟರ್ ನಾಗರಾಜ ಅಲಿಯಾಸ್ ಬಾಂಬ್ ನಾಗ ಎಲ್ಲಿದ್ದಾನೆ ಎಂಬ ಬಗ್ಗೆ ಪೊಲೀಸರಿಗೆ ..
ಬಾಂಬ್ ನಾಗ
ಬಾಂಬ್ ನಾಗ
ಬೆಂಗಳೂರು: ತಲೆ ಮರೆಸಿಕೊಂಡಿರುವ ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಹಾಗೂ ರೌಡಿಶೀಟರ್ ನಾಗರಾಜ ಅಲಿಯಾಸ್ ಬಾಂಬ್ ನಾಗ ಎಲ್ಲಿದ್ದಾನೆ ಎಂಬ ಬಗ್ಗೆ ಪೊಲೀಸರಿಗೆ ಇನ್ನೂ ಖಚಿತ ಮಾಹಿತಿ ದೊರೆತಿಲ್ಲ.
ಗುರುವಾರ ಆತನ ಮನೆ ಮೇಲೆ ದಾಳಿ ನಡೆಸಿದ್ದ ಪೊಲೀಸರು 14.80 ಕೋಟಿ ಹಣವನ್ನು ಸೀಜ್ ಮಾಡಿದ್ದರು. ನಾಗರಾಜ್ ಕುಟುಂಬದ ಸದಸ್ಯರ ಪ್ರಕಾರ ಇನ್ನೆರಡು ದಿನಗಳಲ್ಲಿ ಆತ ಪೊಲೀಸರಿಗೆ ಶರಣಾಗಲಿದ್ದಾನೆ ಎಂದು ಹೇಳಲಾಗಿದೆ,ವಕೀಲರ ಮೂಲಕ ಜಾಮೀನಿಗೆ ಅರ್ಜಿ ಸಲ್ಲಿಸಿ ನೇರವಾಗಿ ಕೋರ್ಟ್ ಗೆ ಹಾಜರಾಗಲಿದ್ದಾನೆ ಎನ್ನಲಾಗಿದೆ.
ನಾಗರಾಜ ತನ್ನ ಇಬ್ಬರು ಮಕ್ಕಳಾದ ಗಾಂಧಿ ಮತ್ತು ಶಾಸ್ತ್ರಿಯೊಂದಿಗೆ ತಮಿಳುನಾಡಿನ ತನ್ನ ಸಂಬಂಧಿಕ ಮನೆಯಲ್ಲಿ ಆಶ್ರಯ ಪಡೆದಿದ್ದಾನೆ ಎಂದು ತಿಳಿದು ಬಂದಿದೆ, ಈ ಮಾಹಿತಿ ಹಿನ್ನೆಲೆಯಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿ ಆತನಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಾಗರಾಜ ಮತ್ತವನ ಗ್ಯಾಂಗ್ ತನ್ನನ್ನು ಕಿಡ್ನಾಪ್ ಮಾಡಿ 50 ಲಕ್ಷ ಹಣ ಮತ್ತು ಚಿನ್ನಾಭರಣಕ್ಕೆ ಬೇಡಿಕೆಯಿಟ್ಟಿದ್ದ ಎಂದು ಏಪ್ರಿಲ್ 7 ರಂದು ಉಮೇಶ್ ಎಂಬಾತ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರ ಅನ್ವಯ ನಾಗರಾಜನ ಮನೆ ಮೇಲೆ ದಾಳಿ ನಡೆಸಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com