ನಿರೀಕ್ಷಣಾ ಜಾಮೀನಿಗಾಗಿ ತಲೆಮರೆಸಿಕೊಂಡಿರುವ ಬಾಂಬ್ ನಾಗ ಅರ್ಜಿ

ಮಾಜಿ ಕಾರ್ಪೋರೇಟರ್ ಮತ್ತು ರೌಡಿ ಶೀಟರ್ ನಾಗರಾಜ್ ಅಲಿಯಾಸ್ ಬಾಂಬ್ ನಾಗ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ...
ಬಾಂಬ್ ನಾಗ
ಬಾಂಬ್ ನಾಗ
Updated on
ಬೆಂಗಳೂರು: ಮಾಜಿ ಕಾರ್ಪೋರೇಟರ್ ಮತ್ತು ರೌಡಿ ಶೀಟರ್ ನಾಗರಾಜ್ ಅಲಿಯಾಸ್ ಬಾಂಬ್ ನಾಗ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. 
ನಿಷೇಧಗೊಂಡಿರುವ 500 ಮತ್ತು 1000 ಮುಖಬೆಲೆಯ ಕೋಟ್ಯಾಂತರ ರುಪಾಯಿ ಮೊತ್ತದ ಹಣವನ್ನು ಅಡಗಿಸಿಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ತನ್ನ ಮನೆಯ ಮೇಲೆ ಪೊಲೀಸ್ ದಾಳಿಯಾದ ಬೆನ್ನಲ್ಲೇ ತಲೆಮರೆಸಿಕೊಂಡಿದ್ದು ಇದೀಗ ಬಂಧನದ ಭೀತಿ ಎದುರಿಸುತ್ತಿರುವ ಬಾಂಬ್ ನಾಗ ಸ್ಥಳೀಯ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದಾರೆ. 
ನಿರೀಕ್ಷಣಾ ಜಾಮೀನು ಅರ್ಜಿಯಲ್ಲಿ ಬಾಂಬ್ ನಾಗ,  ಸಾರ್ವಜನಿಕ ವಲಯದಲ್ಲಿ ನನ್ನ ಮೇಲೆ ಕಳಂಕರಹಿತವಾಗಿದ್ದು ಆದರೆ ಪೊಲೀಸರು ನನ್ನ ತೇಜೋವಧೆ ಮಾಡುತ್ತಿದ್ದಾರೆ. ನನ್ನ ಮನೆಯಲ್ಲಿ ಕೋಟ್ಯಾಂತರ ಮೊತ್ತದ ಹಣ ವಶಪಡಿಸಿಕೊಂಡಿರುವುದಕ್ಕೆ ನನಗೂ ಯಾವುದೇ ಸಂಬಂಧವಿಲ್ಲ. ಆದರೆ ನನ್ನನ್ನು ಕಳಂಕಿತನಾಗಿಸಲು ನನ್ನ ವಿರುದ್ಧ ಷಡ್ಯಂತ ನಡೆದಿದೆ  ಎಂದು ಬರೆದಿದ್ದಾನೆ. 
ನಗದು ಪರಿವರ್ತನೆ ಪ್ರಕರಣದ ಆರೋಪಿ ಉಮೇಶ್ ಎಂಬುವರು ಏಪ್ರಿಲ್ 7ರಂದು ಬಾಂಬ್ ನಾಗ ವಿರುದ್ಧ ದೂರು ನೀಡಿದ್ದರು. ಈ ದೂರಿನನ್ವಯ ನಾಗರಾಜ ಅವರ ಮೇಲೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಅವರ ಮನೆಯಿಂದ 14.80 ಕೋಟಿ ಮೊತ್ತದ 500 ಮತ್ತು 1000 ಮುಖಬೆಲೆಯ ನೋಟುಗಳು ಪತ್ತೆಯಾಗಿದ್ದವು. ಈ ವೇಳೆ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ನಾಗ ಪರಾರಿಯಾಗಿದ್ದು ಪೊಲೀಸರು ಆತನ ಬೆನ್ನು ಬಿದ್ದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com