ಯಾದಗಿರಿ: ರಾಜ್ಯದಲ್ಲಿ ಬರಗಾಲ ತೀವ್ರವಾಗುತ್ತಿದ್ದು, ಹಲವು ಭಾಗಗಳಲ್ಲಿ ಮೇವು ಕೊರತೆ ಎದುರಾಗಿರುವುದರಿಂದ ರೈತರು ಜಾನುವಾರುಗಳನ್ನು ಮಾರಾಟ ಮಾಡುವ ಅನಿವಾರ್ಯ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಯಾದಗಿರಿಯಲ್ಲಿಯೂ ಇದೇ ಪರಿಸ್ಥಿತಿ ಎದುರಾಗಿದ್ದು, ಅತ್ಯಂತ ಕಡಿಮೆ ದರಕ್ಕೆ ಜಾನುವಾರುಗಳನ್ನು ಮಾರಾಟ ಮಾಡಲು ರೈತರು ಮುಂದಾಗುತ್ತಿದ್ದಾರೆ.