ಏಪ್ರಿಲ್ 28ರಂದು ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ರಾಲಿ ನಡೆಸಲಾಗುವುದು ಎಂದು ವಾಟಾಳ್ ತಿಳಿಸಿದ್ದಾರೆ. ಬಾಹುಬಲಿ ಚಿತ್ರದ ನಿರ್ಮಾಪಕರೇ ವಿತರಣೆ ಮಾಡುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ವಿತರಣೆ ಹಕ್ಕು ಇದುವರೆಗೂ ಯಾರೂ ತೆಗೆದುಕೊಂಡಿಲ್ಲ. ಅದಕ್ಕಾಗಿ ವಿತರಕರಿಗೆ ಧನ್ಯವಾದ ತಿಳಿಸುವುದಾಗಿ ಸಾರಾ ಗೋವಿಂದು ತಿಳಿಸಿದ್ದಾರೆ. ವಿಷಯದ ಸಂಬಂಧವಾಗಿ ಇದುವರೆಗೂ ನಿರ್ಮಾಪಕರು ಚಲನಚಿತ್ರ ವಾಣಿಜ್ಯ ಮಂಡಳಿಯನ್ನು ಸಂಪರ್ಕಿಸಿಲ್ಲ, ಈ ಸಂಬಂಧ ಯಾರೂ ಮಾತುಕತೆ ನಡೆಸಿಲ್ಲ ಎಂದು ಹೇಳಿದ್ದಾರೆ.