ಬೆಂಗಳೂರು: ಬೆಂಗಳೂರಿನಲ್ಲಿ ಕೆರೆಗಳು ನಶಿಸಿ ಹೋಗುತ್ತಿರುವುದು ಒಂದೆಡೆಯಾದರೆ, ಮಲಿನಗೊಂಡು, ಬೆಂಕಿ ಹೊತ್ತುಕೊಳ್ಳುವ ಸ್ಥಿತಿಗೆ ತಲುಪಿರುವ ಕೆರೆಗಳು ಮತ್ತೊಂದೆಡೆಯಾಗಿವೆ. ಇಂತಹ ಪರಿಸ್ಥಿತಿಯಲ್ಲಿ ನಾಗರಿಕರೇ ಸ್ವತಃ ಜವಾಬ್ದಾರಿಯನ್ನು ಅರಿತು ನಡೆದುಕೊಂಡರೆ ಅದರ ಪರಿಣಾಮ ಅದ್ಭುತವಾಗಿರುತ್ತದೆ ಎಂಬುದಕ್ಕೆ ಸಾಕ್ಷಿ ವಿನಾಯಕ ನಗರದ ವಿಭೂತಿ ಪುರ ಕೆರೆ.