ಯೋಜನೆಯ ಮೊದಲ ಹಂತದ ಕಾಮಗಾರಿ ಪ್ರಗತಿಯಲ್ಲಿದೆ. ಅವಶ್ಯಕತೆಯಿರುವ ಕಡೆ ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ. ಐದು ಪ್ಯಾಕೇಜ್ ಗಳಿಗೆ ಟೆಂಡರ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಾರನಹಳ್ಳಿಯಿಂದ ಬೈರಗುಂಡ್ಲೂ ಜಲಾಶಯಕ್ಕೆ ಹಾಸನ ಜಿಲ್ಲೆಯ ಅರಸಿಕೆರೆ ಮೂಲಕ ಕಾಲುವೆ ಸಂಪರ್ಕ ಕಲ್ಪಿಸಲಿದೆ, ಬೈರಗುಂಡ್ಲೂ ಜಲಾಶಯದಲ್ಲಿ ಸಂಗ್ರಹಿಸುವ ನೀರನ್ನು ಕಾಲುವೆ ಮೂಲಕ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಹರಿಸಲಾಗುವುದು, ಆದರೆ ಇದಕ್ಕೆ ಇನ್ನೂ ಮೂರು ವರ್ಷಗಳ ಕಾಲ ಸಮಯ ಬೇಕಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.