ತಮಿಳುನಾಡಿನಲ್ಲಿ ಕನ್ನಡ ಚಿತ್ರ ಪ್ರದರ್ಶನಕ್ಕೆ ತೊಂದರೆ ಇಲ್ಲ: ಸಾರಾಗೋವಿಂದು

ತಮಿಳುನಾಡಿನಲ್ಲಿ ಕನ್ನಡ ಚಿತ್ರ ಪ್ರದರ್ಶನಕ್ಕೆ ತೊಂದರೆಯಾಗಿಲ್ಲ. ಒಂದು ವೇಳೆ ಕನ್ನಡ ಚಿತ್ರಗಳ ಪ್ರದರ್ಶನಕ್ಕೆ ಅಡ್ಡಿ ಪಡಿಸಿದ್ದರೆ ಖಂಡಿತಾ ಕರ್ನಾಟಕದಲ್ಲೂ ತಮಿಳು ಚಿತ್ರ ಪ್ರದರ್ಶನ ತಡೆಯಲಾಗುತ್ತದೆ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾರಾಗೋವಿಂದು ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ತಮಿಳುನಾಡಿನಲ್ಲಿ ಕನ್ನಡ ಚಿತ್ರ ಪ್ರದರ್ಶನಕ್ಕೆ ತೊಂದರೆಯಾಗಿಲ್ಲ. ಒಂದು ವೇಳೆ ಕನ್ನಡ ಚಿತ್ರಗಳ ಪ್ರದರ್ಶನಕ್ಕೆ ಅಡ್ಡಿ ಪಡಿಸಿದ್ದರೆ ಖಂಡಿತಾ ಕರ್ನಾಟಕದಲ್ಲೂ ತಮಿಳು ಚಿತ್ರ ಪ್ರದರ್ಶನ ತಡೆಯಲಾಗುತ್ತದೆ ಎಂದು  ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾರಾಗೋವಿಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ಅವರೊಂದಿಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸತ್ಯರಾಜ್ ಕ್ಷಮೆ ಯಾಚನೆ ಬಳಿಕ ತಮಿಳುನಾಡಿನವಲ್ಲಿ ಕನ್ನಡ ಚಿತ್ರ ಪ್ರದರ್ಶನಕ್ಕೆ ಅಡ್ಡಿ ಪಡಿಸಲಾಗಿದೆ ಎಂಬ ವರದಿಗಳು  ಕೇಳಿಬಂದಿದ್ದವು. ಈ ಬಗ್ಗೆ ದಕ್ಷಿಣ ಭಾರತ ಚಲನಚಿತ್ರ ಒಕ್ಕೂಟವನ್ನು ನಾನು ಸಂಪರ್ಕಿಸಿ ಮಾತನಾಡಿದ್ದೆ. ಈ ವೇಳೆ ತಮಿಳುನಾಡಿನಲ್ಲಿ ಕನ್ನಡ ಚಿತ್ರ ಪ್ರದರ್ಶನಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ  ಎಂದು ಸಂಸ್ಥೆಯ ಪದಾಧಿಕಾರಿಗಳು ಭರವಸೆ ನೀಡಿದ್ದಾರೆ. ಒಂದು ವೇಳೆ ಕನ್ನಡ ಚಿತ್ರ ಪ್ರದರ್ಶನಕ್ಕೆ ಅಲ್ಲಿ ತೊಂದರೆಯಾದ ಕುರಿತು ತಮಗೆ ತಿಳಿದರೆ ಖಂಡಿತ ಕರ್ನಾಟಕದಲ್ಲಿಯೂ ತಮಿಳು ಚಿತ್ರ ಪ್ರದರ್ಶನ ತಡೆಯಲಾಗುತ್ತದೆ  ಎಂದು ಅವರು ಎಚ್ಚರಿಕೆ ನೀಡಿದರು.

ತಮಿಳು ಚಿತ್ರದ ಪೋಸ್ಚರ್ ಹರಿದ ಪ್ರತಿಭಟನಾಕಾರರು
ಇನ್ನು ತಮಿಳುನಾಡಿನಲ್ಲಿ ಕನ್ನಡ ಚಿತ್ರ ಪ್ರದರ್ಶನ ತಡೆಯಲಾಗಿದೆ ಎಂಬ ವರದಿ ಮೇರೆಗೆ ಕರ್ನಾಟಕದಲ್ಲೂ ತಮಿಳು ಚಿತ್ರ ಪ್ರದರ್ಶನಕ್ಕೆ ಅಡ್ಡಿ ಪಡಿಸಲು ಕೆಲ ಪ್ರತಿಭಟನಾಕಾರರು ಯತ್ನಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯ  ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ನಗರದ ಸಂಜಯ್ ನಗರದಲ್ಲಿರುವ ಪುಷ್ಪಾಂಜಲಿ ಥಿಯೇಟರ್ ಆವರಣದಲ್ಲಿ ಹಾಕಲಾಗಿದ್ದ ತಮಿಳು ಚಿತ್ರವೊಂದರ ಪೋಸ್ಟರ್ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com