‘ಕಪ್ಪು ಹಣ ಬಿಳಿಯಾಗಿಸುವ ದಂಧೆಯಲ್ಲಿ ಹಲವು ಸಚಿವರು, ಐಎಎಸ್, ಐಪಿಎಸ್ ಅಧಿಕಾರಿಗಳೂ ಇದ್ದಾರೆ. ಪೊಲೀಸ್ ಅಧಿಕಾರಿಗಳೇ ಕಪ್ಪು ಹಣ ಬಿಳಿ ಮಾಡಿಕೊಳ್ಳಲು ನನ್ನ ಬಳಿ ಬರುತ್ತಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಮಂಜುನಾಥ್ ಅವರು ಹಣವನ್ನು ಉಮೇಶ್ ಮತ್ತು ಕಿಶೋರ್ ಮೂಲಕ ಕಳುಹಿಸುತ್ತಿದ್ದರು. ನನ್ನ ಮನೆಗೆ ಬರುವ ವೇಳೆ ಸಿ.ಸಿ.ಟಿವಿ ಕ್ಯಾಮೆರಾ ಬಂದ್ ಮಾಡುತ್ತಿದ್ದೆ. ಕತ್ತಲಲ್ಲಿ ಬಂದು ಹೋಗುತ್ತಿದ್ದರು’ ಎಂದು ಆರೋಪಿಸಿದ್ದಾರೆ.