ಉಸ್ಮಾನ್ ದಂಧೆಯ ಪ್ರಮುಖ ಆರೋಪಿಯಾಗಿದ್ದು, ಈತ ವೆಬ್ ಸೈಟ್ ವೊಂದನ್ನು ತೆರೆದು, ಈ ಮೂಲಕ ಶ್ರೀಮತರು, ದೊಡ್ಡ ಉದ್ಯಮಿಗಳು, ಸರ್ಕಾರಿ ಅಧಿಕಾರಿಗಳು, ಟೆಕ್ಕಿಗಳನ್ನು ಸಂಪರ್ಕಿಸುತ್ತಿದ್ದ. ಸಿಇಒಗಳು, ಕಂಪನಿಯ ಅತಿಥಿಗಳು ಮಾತ್ರ ಮನೆಗೆ ಬರುತ್ತಾರೆಂದು ಹೇಳಿದ್ದ ಆರೋಪಿ ಉದ್ಯಮಿಯೊಬ್ಬರಿಂದ ಬಂಗಲೆಯನ್ನು ಬೋಗ್ಯಕ್ಕೆ ಪಡೆದುಕೊಂಡು ಅಲ್ಲಿ ವೇಶ್ಯಾವಾಟಿಕೆಗೆ ನಡೆಸುತ್ತಿದ್ದ.