ಬೆಂಗಳೂರು: ಇಂದಿನಿಂದ ಅಪ್ಪಾಜಿ ಕ್ಯಾಂಟೀನ್ ನಲ್ಲಿ ಅತಿ ಕಡಿಮೆ ದುಡ್ಡಿಗೆ ಹೊಟ್ಟೆ ತುಂಬಾ ಊಟ!

ರಾಜ್ಯ ಸರ್ಕಾರ ಕಡಿಮೆ ದರದಲ್ಲಿ ಆಹಾರ ನೀಡುವ ಇಂದಿರಾ ಕ್ಯಾಂಟೀನ್​ನಿರ್ಮಾಣಕ್ಕೆ ಮುಂದಾಗಿದೆ. ಸರ್ಕಾರದ ಇಂದಿರಾ ಕ್ಯಾಂಟೀನ್​ಗೆ ಸೆಡ್ಡು ಹೊಡೆಯಲು...
ನಮ್ಮ ಅಪ್ಪಾಜಿ ಕ್ಯಾಂಟೀನ್
ನಮ್ಮ ಅಪ್ಪಾಜಿ ಕ್ಯಾಂಟೀನ್
Updated on
ಬೆಂಗಳೂರು: ರಾಜ್ಯ ಸರ್ಕಾರ ಕಡಿಮೆ ದರದಲ್ಲಿ ಆಹಾರ ನೀಡುವ ಇಂದಿರಾ ಕ್ಯಾಂಟೀನ್​ನಿರ್ಮಾಣಕ್ಕೆ ಮುಂದಾಗಿದೆ. ಸರ್ಕಾರದ ಇಂದಿರಾ ಕ್ಯಾಂಟೀನ್​ಗೆ ಸೆಡ್ಡು ಹೊಡೆಯಲು ಇದೀಗ ಜೆಡಿಎಸ್ ಮುಖಂಡ ಶಾಸಕ ಟಿ ಎ ಶರವಣ ಅಪ್ಪಾಜಿ ಕ್ಯಾಂಟೀನ್​ಆರಂಭಿಸಿದ್ದಾರೆ. 
ಶರವಣ ನಿರ್ಮಿಸಿರುವ ಅಪ್ಪಾಜಿ ಕ್ಯಾಂಟಿನ್ ಇಂದಿನಿಂದ ಕಾರ್ಯಾರಂಭ ಮಾಡಲಿದೆ. 10 ರೂಪಾಯಿಗೆ ಮುದ್ದೆ ಊಟ ಅನ್ನ ಸಾಂಬಾರ್, 5 ರೂಪಾಯಿಗೆ ಇಡ್ಲಿ ಕೇಸರಿಬಾತ್ ನೀಡುವ 'ದೇವೇಗೌಡ ನಮ್ಮ ಅಪ್ಪಾಜಿ ಕ್ಯಾಂಟೀನ್' ಇಂದು ಉದ್ಘಾಟನೆಗೊಳ್ಳಲಿದೆ
ಶ್ರೀ ಸಾಯಿ ಸಮರ್ಪಣ ಚಾರಿಟೇಬಲ್ ನಿಂದ ಈ ಯೋಜನೆ ಕಾರ್ಯರೂಪಕ್ಕೆ ಬಂದಿದ್ದು, ಪ್ರಾರಂಭದಲ್ಲಿ ಬಸವನಗುಡಿ ವಿಧಾನಸಭಾ ಕ್ಷೇತ್ರದ ಹನುಮಂತನಗರದಲ್ಲಿ ಕ್ಯಾಂಟೀನ್ ಆರಂಭವಾಗುತ್ತಿದೆ.  ಇಂದು ಬೆಳಗ್ಗೆ 11 ಗಂಟೆಗೆ ನಮ್ಮ ಅಪ್ಪಾಜಿ ಕ್ಯಾಂಟಿನ್ ಲೋಕಾರ್ಪಣೆಗೊಳ್ಳಲಿದೆ.
ಅಪ್ಪಾಜಿ ಕ್ಯಾಂಟೀನ್‌'ನಲ್ಲಿ 5 ರೂ.ಗೆ ತಟ್ಟೆ ಇಡ್ಲಿ-ವಡೆ, ಖಾರಾಬಾತ್‌, ಕೇಸರಿಬಾತ್‌, 10 ರೂ.ಗೆ ಪೊಂಗಲ್‌, ಮುದ್ದೆ ಬಸ್ಸಾರು, ಅನ್ನ ಸಾಂಬಾರ್,ರೈಸ್‌ ಬಾತ್‌,3 ರೂ.ಗೆ ಕಾಫಿ-ಟೀ ನೀಡಲಾಗುವುದು.ಬೆಳಗ್ಗೆ 7.30 ರಿಂದ ಮಧ್ಯಾಹ್ನ 2.30ರ ತನಕ ಕ್ಯಾಂಟೀನ್ ಓಪನ್ ಇರಲಿದೆ.
10 ಲಕ್ಷ ವೆಚ್ಚದಲ್ಲಿ ಕ್ಯಾಂಟೀನ್ ನಿರ್ಮಾಣ ಆಗಿದ್ದು, ಆರಂಭದಲ್ಲಿ ಸಾವಿರ ಮಂದಿಗೆ ತಿಂಡಿ, ಊಟದ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com