ಡಿಕೆಶಿ ಮೇಲೆ ಐಟಿ ದಾಳಿ ಮೂಲಕ ಬಿಜೆಪಿ ನಮ್ಮನ್ನು ಬೆದರಿಸುತ್ತಿದೆ: ಗುಜರಾತ್ ಕಾಂಗ್ರೆಸ್ ಶಾಸಕರು

ಐಟಿ ದಾಳಿ ನಡೆಸುವ ಮೂಲಕ ಬಿಜೆಪಿ ನಮ್ಮನ್ನು ಬೆದರಿಸುತ್ತಿದೆ ಎಂದು ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿರುವ ಗುಜರಾತ್ ಕಾಂಗ್ರೆಸ್ ಶಾಸಕರು ಆರೋಪಿಸಿದ್ದಾರೆ...
ಶಕ್ತಿ ಸಿನ್ಹಾ ಗೊಯಿಲ್
ಶಕ್ತಿ ಸಿನ್ಹಾ ಗೊಯಿಲ್
ಬೆಂಗಳೂರು: ಐಟಿ ದಾಳಿ ನಡೆಸುವ ಮೂಲಕ ಬಿಜೆಪಿ ನಮ್ಮನ್ನು ಬೆದರಿಸುತ್ತಿದೆ ಎಂದು ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿರುವ ಗುಜರಾತ್ ಕಾಂಗ್ರೆಸ್ ಶಾಸಕರು ಆರೋಪಿಸಿದ್ದಾರೆ. 
ಕರ್ನಾಟಕ ಇಂದನ ಸಚಿವ ಡಿ.ಕೆ ಶಿವಕುಮಾರ್ ನಿವಾಸ ಸೇರಿದಂತೆ 39 ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನು ರಾಮನಗರ ಜಿಲ್ಲೆಯ ಬಿಡದಿ ತಾಲೂಕಿನಲ್ಲಿರುವ ಈಗಲ್ ಟನ್ ರೆಸಾರ್ಟ್ ಮೇಲೂ ಐಟಿ ದಾಳಿ ನಡೆಸಿದ್ದು. ಈ ದಾಳಿಯ ನಂತರ ಗುಜರಾತ್ ಕಾಂಗ್ರೆಸ್ ಶಾಸಕರು ಈ ಆರೋಪ ಮಾಡಿದ್ದಾರೆ. 
ಗುಜರಾತ್ ಶಾಸಕ ಮತ್ತು ಎಐಸಿಸಿ ರಾಷ್ಟ್ರೀಯ ವಕ್ತಾರ ಶಕ್ತಿ ಸಿನ್ಹಾ ಗೊಯಿಲ್ ಅವರು ಇಂಧನ ಸಚಿವ ಡಿಕೆ ಶಿವಕುಮಾರ್ ಅವರ ಮನೆ ಮೇಲೆ ದಾಳಿ ನಡೆಸುವ ಮೂಲಕ ಬಿಜೆಪಿ ನಮ್ಮನ್ನು ಬೆದರಿಸುತ್ತಿದೆ. ಗುಜರಾತ್ ಕಾಂಗ್ರೆಸ್ ಶಾಸಕರಿಗೆ ವಸತಿ ಕಲ್ಪಿಸಿರುವ ಇಂತಹ ಸಮಯದಲ್ಲಿ ಡಿಕೆ ಶಿವಕುಮಾರ್ ಅವರ ಮೇಲೆ ಐಟಿ ದಾಳಿ ನಡೆಸಿರುವುದು ಸರಿಯಲ್ಲ ಎಂದು ಹೇಳಿದ್ದಾರೆ. 
ಈ ಐಟಿ ದಾಳಿಯಿಂದ ನಮ್ಮ ನೈತಿಕತೆಯು ಪ್ರಬಲವಾಗಿದೆ. ಆಗಸ್ಟ್ 8ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಅಹಮ್ಮದ್ ಪಟೇಲ್ ಅವರಿಗೆ ನಾವು ಮತ ಚಲಾಯಿಸುವುದಾಗಿ ಶಕ್ತಿ ಸಿನ್ಹಾ ಗೊಯಿಲ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com