ನಿನ್ನೆ ಸಂಜೆ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ರೆಸಾರ್ಟ್ ಗೆ ಭೇಟಿ ನೀಡಿ ಶಾಸಕರಿಗೆ ಧೈರ್ಯ ತುಂಬಿದ್ದಾರೆ ನಿಮ್ಮ ರಕ್ಷಣೆ ಹೊಣೆ ನಮ್ಮದು , ಹೀಗಾಗಿ ನಿಶ್ಟಿಂತೆಯಿಂದ ಇರುವಂತೆ ಹೇಳಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಪರಮೇಶ್ವರ್, ಶಾಸಕರ ಜವಾಬ್ದಾರಿ ನಮ್ಮ ಮೇಲಿದೆ. ಯಾವ ಶಾಸಕರು ವಾಪಸ್ ತೆರಳುವುದಾಗಿ ಹೇಳಿಲ್ಲ ಎಂದು ಪರಮೇಶ್ವರ್ ತಿಳಿಸಿದ್ದಾರೆ.