ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರೆಡ್ಡಿ, ಕಸ ವಿಲೇವಾರಿ ಅವ್ಯವಹಾರದಲ್ಲಿ ಮೇಯರ್ ಜಿ.ಪದ್ಮಾವತಿ ಅವರು ಶಾಮೀಲಾಗಿದ್ದು, ಇದರಿಂದ ಪಾಲಿಕೆ ಬೊಕ್ಕಸಕ್ಕೆ ಸುಮಾರು 200 ಕೋಟಿ ರು. ನಷ್ಟ ಸಂಭವಿಸುತ್ತಿದೆ. ಈ ನಷ್ಟವನ್ನು ಕಾಂಗ್ರೆಸ್ನೋರು ಭರಿಸ್ತಾರಾ ಎಂದು ಪ್ರಶ್ನಸಿದ್ದಾರೆ. ಅಲ್ಲದೆ ಈ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.