ನಿರ್ಜೀವ ಮತ್ತು ಬತ್ತಿ ಹೋದ ಕೆರೆಗಳನ್ನು ಡಿನೋಟಿಫಿಕೇಷನ್ ಯಾವುದೇ ಪ್ರಸ್ತಾಪ ತಮ್ಮ ಮುಂದೆ ಇದ್ದರೆ ಅದನ್ನು ಕೈಬಿಡುವಂತೆ ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಅವರು ಬರೆದಿದ್ದ ಪತ್ರಕ್ಕೆ ಟ್ವೀಟರ್ ಮೂಲಕ ಪ್ರತಿಕ್ರಿಯಿಸಿರುವ ಸಿಎಂ, ಇದು ಭಾರಿ ತಪ್ಪು ಗ್ರಹಿಕೆಯಾಗಿದೆ. ಯಾವುದೇ ಕೆರೆಯನ್ನು ನಾವು ಡಿನೋಟಿಫೈ ಮಾಡುತ್ತಿಲ್ಲ. ಕೆರೆಗಳನ್ನು ಪರಿಶೀಲಿಸಿ ಭರ್ತಿ ಮಾಡುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.