ಜೆಡಿಎಸ್ ಸರ್ವೋಚ್ಚ ನಾಯಕ ಎಚ್.ಡಿ ದೇವೇಗೌಡ ಎರಡು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಕುಡಿಯುವ ನೀರಿನ ಉದ್ದೇಶಕ್ಕಾಗಿ ಹೇಮಾವತಿ ನದಿಯಿಂದ ನೀರು ಬಿಡಬೇಕು, ಇಲ್ಲದಿದ್ದರೇ ಉಗ್ರ ಕ್ರಮ ಎದುರಿಸಬೇಕಾಗುವುದು ಎಂದು ಹೇಳಿದ್ದರು, ಕೂಡಲೇ ದೇವೇಗೌಡರಿಗೆ ಕರೆ ಮಾಡಿದ ಸಿಎಂ ನೀರು ಬಿಡುವುದಾಗಿ ಭರವಸೆ ನೀಡಿದ್ದರು.