ಮಂಗಳೂರು ಕೋಮುಗಲಭೆ ಹಿನ್ನೆಲೆ: ಐಪಿ ಎಸ್ ಅಧಿಕಾರಿಗಳ ವರ್ಗಾವಣೆ

ಪಶ್ಚಿಮ ವಲಯ ಐಜಿಪಿಯಾಗಿದ್ದ ಪಿ.ಹರಿಶೇಖರನ್‌ ಅವರನ್ನು ಬೆಂಗಳೂರಿನ ಕೇಂದ್ರ ಸ್ಥಾನದ ಐಜಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ....
ಹೇಮಂತ್ ನಿಂಬಾಳ್ಕರ್  ಮತ್ತು ಪಿ. ಹರಿಶೇಖರನ್
ಹೇಮಂತ್ ನಿಂಬಾಳ್ಕರ್ ಮತ್ತು ಪಿ. ಹರಿಶೇಖರನ್
Updated on
ಬೆಂಗಳೂರು: ಪಶ್ಚಿಮ ವಲಯ ಐಜಿಪಿಯಾಗಿದ್ದ ಪಿ.ಹರಿಶೇಖರನ್‌ ಅವರನ್ನು ಬೆಂಗಳೂರಿನ ಕೇಂದ್ರ ಸ್ಥಾನದ ಐಜಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಮಂಗಳೂರಿನ ದಕ್ಷಿಣ ಕನ್ನಡದಲ್ಲಿ ನಡೆದ ಆರ್ ಎಸ್ ಎಲ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಸೋಮವಾರ ಪಿ. ಹರಿಶೇಖರ್ ಅವರ ಬದಲಿಗೆ ಹೇಮಂತ್ ನಿಂಬಾಳ್ಕರ್ ಅವರನ್ನು ಪಶ್ಚಿಮ ವಲಯ ಐಜಿಪಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಶರತ್ ಮಡಿವಾಳ ಕೊಲೆ ಪ್ರಕರಣ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ನಡೆದ ಹಲವು ಅಹಿತಕರ ಘಟನೆಗಳಿಂದ ಕಾನೂನು ಸುವ್ಯವಸ್ಥೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತ ಪಡಿಸಿದ್ದರು.
ಸುನೀಲ್ ಕುಮಾರ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಮೇಲೆ ಹೇಮಂತ್ ನಿಂಬಾಳ್ಕರ್ ಬೆಂಗಳೂರಿನಿಂದ ರಿಲಿವ್ ಆಗಲಿದ್ದಾರೆ. 
ಬಿಜಯ್ ಕುಮಾರ್ ಸಿಂಗ್ ಅವರನ್ನು ಗುಪ್ತಚರ ಇಲಾಖೆ ಐಜಿಯಾಗಿ ನೇಮಕ ಮಾಡಲಾಗಿದೆ. ಅಪರಾದ ವಿಭಾಗದ ಹೆಚ್ಚುವರಿ ಆಯುಕ್ತ ಎಸ್. ರವಿ ಅವರನ್ನು ಭದ್ರತೆ ಮತ್ತು ವಿಚಕ್ಷಣಾ ದಳದ ನಿರ್ದೇಶಕರನ್ನಾಗಿ, ಎನ್ ಸತೀಶ್ ಕುಮಾರ್ ಅವರನ್ನು ಅಪರಾಧ ವಿಭಾಗದ  ಜಂಟಿ ಆಯುಕ್ತರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com