ಬೆಂಗಳೂರು: ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಧಾರ್ಮಿಕ ಮಾನ್ಯತೆ ನೀಡಬೇಕೆಂಬ ಚರ್ಚೆಯ ಕಾವು ಹೆಚ್ಚಾಗುವ ಲಕ್ಷಣ ಕಾಣುತ್ತಿದೆ. ನಿನ್ನೆ 40 ಲಿಂಗಾಯತ ಮಠಗಳ ಮುಖ್ಯಸ್ಥರು ಮತ್ತು ಇತರ ಮುಖಂಡರು, ಕೆಲವು ಸಚಿವರು ಒಗ್ಗಟ್ಟಾಗಿ ಲಿಂಗಾಯತರಿಗೆ ಪ್ರತ್ಯೇಕ ಸ್ವತಂತ್ರ ಹಾಗೂ ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ನೀಡುವಂತೆ ನಿರ್ಣಯ ಹೊರಡಿಸುವಂತೆ ಒತ್ತಾಯಿಸಿದರು. ಅಲ್ಲದೆ ಬಸವಾದಿ ಶರಣರು ಸ್ಥಾಪಿಸಿದ ಲಿಂಗಾಯತ ಧರ್ಮ, ಸಿದ್ದಾಂತ ಮತ್ತು ವಚನಗಳನ್ನು ವೀರಶೈವದ ಹೆಸರಿನಲ್ಲಿ ಬಳಸಿಕೊಳ್ಳಬಾರದು ಎಂದು ಒತ್ತಾಯಿಸಿದ್ದಾರೆ.