ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಆ.7ರಂದು ಸಂತೋಷ್ಗೆ ನೋಟಿಸ್ ನೀಡಿದ್ದರು. ಅದರಂತೆ, ಗುರುವಾರ ಬೆಳಿಗ್ಗೆ 10.30ರ ಸುಮಾರಿಗೆ ಅವರು ತಮ್ಮ ವಕೀಲರ ಜತೆ ಮಲ್ಲೇಶ್ವರ ಉಪವಿಭಾಗದ ಎಸಿಪಿ ಕಚೇರಿಗೆ ತೆರಳಿದರು. ಸಂಜೆವರೆಗೂ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡ ಎಸಿಪಿ ಆನಂದ್ ಬಡಿಗೇರ್ ನೇತೃತ್ವದ ತಂಡ, ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಕಳುಹಿಸಿದೆ.