ಇನ್ನು ವಿಚಾರಣೆ ವೇಳೆ ಸಂತೋಷ್ ಕುಮಾರ್ ಗೊಂದಲದ ಉತ್ತರಗಳನ್ನು ನೀಡುತ್ತಿದ್ದಾರೆ. ಮೊದಲಿಗೆ ವಿನಯ್ ಮತ್ತು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಅರಸ್ ಯಾರು ಅಂತ ಗೊತ್ತಿಲ್ಲ ಅಂದು ನಂತರ ಆತ ನನ್ನ ಸ್ನೇಹಿತ ಎಂದು ಹೇಳಿದ್ದಾನೆ. ನಮ್ಮ ನಡುವೆ ಕೆಲ ಭಿನ್ನಾಭಿಪ್ರಾಯಗಳಿವೆ. ಅವುಗಳನ್ನು ನಾವೇ ಬಗೆಹರಿಸಿಕೊಳ್ಳುತ್ತೇವೆ. ಬೇರೆ ಯಾರೋ ಮಾಡಿರುವ ಕೃತ್ಯದಲ್ಲಿ ನನ್ನ ಹೆಸರು ಥಳಕು ಹಾಕಲಾಗುತ್ತಿದೆ ಎಂದು ಹೇಳಿಕೆ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.