ಅಮಿತ್ ಶಾರಿಂದ ಬಾಲಗಂಗಾಧರ ಸ್ವಾಮೀಜಿ ಜೀವನಾಧರಿತ The Story Of A Guru ಪುಸ್ತಕ ಬಿಡುಗಡೆ

ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಬಾಲಗಂಗಾಧರನಾಥ ಸ್ವಾಮೀಜಿ ಅವರ ಜೀವನಾಧರಿತ The Story Of A Guru ಪುಸ್ತಕವನ್ನು ಬಿಡುಗಡೆ ಮಾಡಿದರು...
ಬಾಲಗಂಗಾಧರನಾಥ ಸ್ವಾಮೀಜಿ
ಬಾಲಗಂಗಾಧರನಾಥ ಸ್ವಾಮೀಜಿ
Updated on
ಮಂಡ್ಯ: ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು  ಬಾಲಗಂಗಾಧರನಾಥ ಸ್ವಾಮೀಜಿ ಅವರ ಜೀವನಾಧರಿತ The Story Of A Guru ಪುಸ್ತಕವನ್ನು ಬಿಡುಗಡೆ ಮಾಡಿದರು. 
ಅಮಿತ್ ಶಾ ಅವರು ಭಾನುವಾರ ಬೆಳಗ್ಗೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ನಡೆಸಿ ಬಳಿಕ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಕಾಲಭೈರವೇಶ್ವರನಿಗೆ ಪೂಜೆ ಸಲ್ಲಿಸಿದ ಆನಂತರ ಪುಸ್ತಕ ಬಿಡುಗಡೆ ಮಾಡಿದರು. 
ದ ಸ್ಟೋರಿ ಆಫ್ ಎ ಗುರು ಡಾ. ಬಾಲಗಂಗಾಧರನಾಥ ಸ್ವಾಮೀಜಿ ಮತ್ತು ಶ್ರೀಮಠ ಕುರಿತಾಗಿದೆ. ಇನ್ನು ಪುಸ್ತಕ ಬಿಡುಗಡೆ ವೇಳೆ ನಿರ್ಮಲಾನಂದನಾಥ ಸ್ವಾಮೀಜಿ ಉಪಸ್ಥಿತರಿದ್ದರು. ಇನ್ನು ಅಮಿತ್ ಶಾ ಅವರು ಆದಿಚುಂಚನಗಿರಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಹಾಗೂ ಇಂಜಿನಿಯರ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com