ವಿಜಯಲಕ್ಷ್ಮೀ
ವಿಜಯಲಕ್ಷ್ಮೀ

ಬೆದರಿಕೆ ಕರೆ: ಎಚ್ ವೈ ಮೇಟಿ ರಾಸಲೀಲೆ ಪ್ರಕರಣದ ಸಂತ್ರಸ್ತೆ ಮಹಿಳೆ ಆತ್ಮಹತ್ಯೆಗೆ ಯತ್ನ

ಮಾಜಿ ಅಬಕಾರಿ ಸಚಿವ ಎಚ್ ವೈ ಮೇಟಿ ಅವರ ರಾಸಲೀಲೆ ಸಿಡಿ ಪ್ರಕರಣದ ಸಂತ್ರಸ್ತ ಮಹಿಳೆ ಭಾನುವಾರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ..
ಬಾಗಲಕೋಟೆ: ಮಾಜಿ ಅಬಕಾರಿ ಸಚಿವ ಎಚ್ ವೈ ಮೇಟಿ ಅವರ ರಾಸಲೀಲೆ ಸಿಡಿ ಪ್ರಕರಣದ ಸಂತ್ರಸ್ತ ಮಹಿಳೆ ಭಾನುವಾರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಸಂತ್ರಸ್ತ ಮಹಿಳೆ ವಿಜಯಲಕ್ಷ್ಮೀ ಅವರು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ಆಸ್ಪತ್ರೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಮಹಿಳೆ ಮೇಟಿ ಬೆಂಬಲಿಗರಿಂದ ತನಗೆ ನಿರಂತರ ಬೆದರಿಕೆ ಕರೆ ಬರುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ವಿಜಯಲಕ್ಷ್ಮಿ ಆರೋಪಿಸಿದ್ದಾರೆ. 
ವಿಜಯಲಕ್ಷ್ಮಿ ಅವರು ಅತಿಯಾದ ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಚಿಕಿತ್ಸೆಗೆ ಸ್ಪಂದಿಸುತ್ತಿರುವ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 
ಘಟನಾ ಸ್ಥಳಕ್ಕೆ ಸಿಪಿಐ ಮಲ್ಲಿಕಾರ್ಜುನ ತುಳಸಗೇರಿ ಅವರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com