ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಜ್ಯಾದ್ಯಂತ ಭಾರೀ ಮಳೆ: ವರುಣನ ಅಬ್ಬರಕ್ಕೆ ಮೈಸೂರಿನಲ್ಲಿ ವ್ಯಕ್ತಿ ಬಲಿ

ರಾಜ್ಯದಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ತಡರಾತ್ರಿ ಸುರಿದ ಭಾರೀ ಮಳೆಗೆ ವ್ಯಕ್ತಿಯೋರ್ವ ಬಲಿಯಾಗಿದ್ದಾನೆಂದು ಮಂಗಳವಾರ ತಿಳಿದುಬಂದಿದೆ...
Published on
ಬೆಂಗಳೂರು: ರಾಜ್ಯದಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ತಡರಾತ್ರಿ ಸುರಿದ ಭಾರೀ ಮಳೆಗೆ ವ್ಯಕ್ತಿಯೋರ್ವ ಬಲಿಯಾಗಿದ್ದಾನೆಂದು ಮಂಗಳವಾರ ತಿಳಿದುಬಂದಿದೆ. 
ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮನೆಯ ಗೋಡೆ ಕುಸಿದ ಪರಿಣಾಮ ಮಗ್ಗಿ (40) ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರನೆಂದು ವರದಿಗಳು ತಿಳಿಸಿವೆ. 
ಮೈಸೂರಿನ ಗಾಂಧಿನಗರದ ಲಿಡ್ಕರ್ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕಾಗಮಿಸಿರವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. 
ಮಂಡ್ಯ ಮತ್ತು ಇತರೆ ಜಿಲ್ಲೆಗಳಲ್ಲಿ ಮಳೆರಾಯನ ನರ್ತನ ರೈತರಲ್ಲಿ ಸಂತಸವನ್ನು ತಂದಿದೆ. ಕಳೆದ ರಾತ್ರಿ 8 ಗಂಟೆಗೆ ಸುಮಾರಿಗೆ ಆರಂಭವಾದ ಮಳೆ ಸ್ವಲ್ಪ ಸಮಯದ ಬಳಿಕ ನಿರಂತರವಾಗಿ ಸುರಿಯಲು ಆರಂಭಿಸಿತ್ತು. ಮಳೆರಾಯನ ಆಗಮನದಿಂದಾಗಿ ರೈತರು ಮುಖದಲ್ಲಿ ಹರ್ಷ ವ್ಯಕ್ತವಾಗಿದೆ. ರೈತರ ಭೂಮಿಗೆ ಉತ್ತಮವಾಗಿ ನೀರು ದೊರಕಿದಂತಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com