ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ಮೂರುದಿನಗಳ ಕಾಲ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ 7 ಗಂಟೆಗಳ ನಂತರ ವ್ಯಕ್ತಿಯೊಬ್ಬ ಸಚಿವರ ಸಹೋದರ ಸುರೇಶ್ ಅವರ ಕಚೇರಿಗೆ ಕರೆ ಮಾಡಿದ್ದಾನೆ. ಆ ಸಂದರ್ಭದಲ್ಲಿ ಸುರೇಶ್ ಕಚೇರಿಯಲ್ಲಿ ಇರಲಿಲ್ಲವಾದ್ದರಿಂದ ಅವರ ಸಹಾಯಕ ಅರುಣ್ದೇವ್ ಕರೆ ಸ್ವೀಕರಿಸಿದ್ದಾರೆ. ಹಿಂದಿಯಲ್ಲಿ ಮಾತನಾಡಿರುವ ಆರೋಪಿ, ‘ನಾನು ರವಿಪೂಜಾರಿ. ಹಣಕ್ಕಾಗಿ ಕರೆ ಮಾಡಿದ್ದೇನೆ’ ಎಂದಿದ್ದಾನೆ.