1999ರಲ್ಲಿ ಭಾರತ ಪಾಕಿಸ್ತಾನ ವಿರುದ್ಧ ಕಾರ್ಗಿಲ್ ಯುದ್ಧದಲ್ಲಿ ಗೆದ್ದಾಗ ಧಾರವಾಡದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಮೀಪ ಒಂದು ಸ್ಮಾರಕವನ್ನು ನಿರ್ಮಿಸಲಾಯಿತು. ಹುತಾತ್ಮ ಸೈನಿಕರನ್ನು ಸ್ಮರಿಸಲು ಕಟ್ಟಿದ ಸ್ಮಾರಕಕ್ಕೆ ಕಾರಣೀಭೂತರಲ್ಲಿ ಅಮಿನ್ ಗಡ ಕೂಡ ಒಬ್ಬರು. ಕಳೆದ 17 ವರ್ಷಗಳಿಂದ ಪ್ರತಿದಿನ ಕಾರ್ಗಿಲ್ ಸ್ತೂಪಕ್ಕೆ ಹೋಗಿ ಅಲ್ಲಿ ಸುತ್ತಮುತ್ತ ಸ್ವಚ್ಛಗೊಳಿಸುತ್ತಾರೆ. ಅಲ್ಲಿ ಸ್ವಲ್ಪ ಹೊತ್ತು ಕಳೆದು ಯೋಗ, ಧ್ಯಾನ ಮಾಡಿ ಮನೆಗೆ ಹಿಂತಿರುಗುತ್ತಾರೆ.