ನಿತ್ಯೋತ್ಸವ ಕವಿ ಕೆಎಸ್ ನಿಸಾರ್ ಅಹಮದ್ ಅವರಿಂದ ಈ ಬಾರಿ ದಸರಾ ಉದ್ಘಾಟನೆ

ಸೆಪ್ಟೆಂಬರ್ 21 ರಿಂದ 9 ದಿನಗಳ ಕಾಲ ನಡೆಯಲಿರುವ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾವನ್ನು ನಿತ್ಯೋತ್ಸವ ಕವಿ ಕೆಸ್ ನಿಸಾರ್ ಅಹಮದ್ ...
ಕೆಎಸ್ ನಿಸಾರ್ ಅಹ್ಮದ್
ಕೆಎಸ್ ನಿಸಾರ್ ಅಹ್ಮದ್
ಮೈಸೂರು: ಸೆಪ್ಟೆಂಬರ್ 21 ರಿಂದ 9 ದಿನಗಳ ಕಾಲ ನಡೆಯಲಿರುವ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾವನ್ನು ನಿತ್ಯೋತ್ಸವ ಕವಿ ಕೆಸ್ ನಿಸಾರ್ ಅಹಮದ್ ಅವರು ಉದ್ಘಾಟಿಸಲಿದ್ದಾರೆ. 
ಹಿರಿಯ ಕವಿ ಕೆಸ್ ನಿಸಾರ್ ಅಹಮದ್ ಅವರು ಉದ್ಘಾಟಿಸಬೇಕೆಂದು ದಸರಾ ಉನ್ನತ ಮಟ್ಟದ ಸಮಿತಿ ನಿರ್ಧರಿಸಿದೆ. ಅದರಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಸಾರ್ ಜತೆ ಮಾತುಕತೆ ನಡೆಸಿರುವುದಾಗಿ ಲೋಕೋಪಯೋಗಿ ಸಚಿವ ಎಚ್.ಸಿ ಮಹಾದೇವಪ್ಪ ಹೇಳಿದ್ದಾರೆ.
ನಿಸಾರ್ ಅಹಮದ್  ಅವರಿಗೆ  ಒಂದು ವಾರದಲ್ಲಿ ಆಹ್ವಾನ ಪತ್ರಿಕೆ ನೀಡಲಾಗುವುದು ಎಂದು ಅವರು ತಿಳಿಸಿದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿರುವ ನಿಸಾರ್ ಅಹ್ಮದ್,  ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ಕೂಡ ವಹಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com