ಶಿಕ್ಷಕಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು

ಶಂಭಯ್ಯನ ಪಾಳ್ಯದ ಸರ್ಕಾರಿ ಶಾಲೆಯ ಶಿಕ್ಷಕಿ ಸುನಂದಮ್ಮನ ಮೇಲೆ ಪೆಟ್ರೋಲ್ ಸುರಿದು ಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮಾಗಡಿ: ಶಂಭಯ್ಯನ ಪಾಳ್ಯದ ಸರ್ಕಾರಿ ಶಾಲೆಯ ಶಿಕ್ಷಕಿ ಸುನಂದಮ್ಮನ ಮೇಲೆ ಪೆಟ್ರೋಲ್ ಸುರಿದು ಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 
ತುಮಕೂರು ಜಿಲ್ಲೆಯ ದೇವರಾಯಪಟ್ನಾ ಮೂಲದ 55 ವರ್ಷದ ರೇಣುಕಾರಾಧ್ಯ ಧರ್ಮಸ್ಥಳದ ಸಮೀಪ ಮಲ್ಲರ್ ಮಾಡಿ ವಸತಿಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ. 
ಪತ್ನಿ ಸುನಂದಮ್ಮ ಶಾಲೆಯಲ್ಲಿದ್ದಾಗಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದ ರೇಣುಕಾರಾಧ್ಯ ನಂತರ ಅಲ್ಲಿಂದ ಪರಾರಿಯಾಗಿದ್ದ. ಬಂಧನ ಭೀತಿಯಿಂದ ರೇಣುಕಾರಾಧ್ಯ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. 
ಸುನಂದಮ್ಮನ ಜತೆ ಲಿವಿಂಗ್ ಟುಗೆದರ್ ಸಂಬಂಧ ಹೊಂದಿದ್ದ ರೇಣುಕಾರಾಧ್ಯ ಆಕೆಯಿಂದ 2 ಲಕ್ಷ ಹಣ ಮತ್ತು 4 ಲಕ್ಷ ರುಪಾಯಿ ಮೊತ್ತದ ಚಿನ್ನಾಭರಣವನ್ನು ಪಡೆದಿದ್ದರು. ಹಣ ಮತ್ತು ಚಿನ್ನಾಭರಣವನ್ನು ವಾಪಸ್ ನೀಡುವಂತೆ ಆಕೆ ಪೀಡಿಸಿದ್ದರಿಂದ ರೇಣುಕಾರಾಧ್ಯ ಆಕೆಯ ಹತ್ಯೆಗೆ ಮುಂದಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

ರೇಣುಕಾರಾಧ್ಯಗೆ ಅದಾಗಲೇ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com