ನಾನು ಐಎಎಸ್ ಹುದ್ದೆಗೆ ಬಡ್ತಿ ನಿರೀಕ್ಷೆಯಲ್ಲಿದ್ದೇನೆ. ಹೀಗಾಗಿ ಬಾಲರಾಜ್ ತಾವು ಹೇಳಿದಂತೆ ಒಪ್ಪುವಂತೆ ಆಗ್ರಹಿಸಿದರು. ಆ ಸಂದರ್ಭದಲ್ಲಿ ನಾನು ಅವರ ಕಾನೂನು ಬಾಹಿರ ಬೇಡಿಕೆಗೆ ಸ್ಪಂದಿಸದೆ ಎಸಿಬಿ ಕಚೇರಿಯಿಂದ ಹೊರ ಬಂದೆ. ಎಸಿಬಿ ಅಧಿಕಾರಿಗಳ ಒತ್ತಡಕ್ಕೆ ಮಣಿಯದಿರುವುದಕ್ಕೆ ನನ್ನನ್ನು ಎರಡನೇ ಆರೋಪಿ ಎಂದು ಮಾಡಲಾಗಿದೆ. ಆ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಆಗಸ್ಟ್ 17 ರಂದು ಎಸಿಬಿ ಅಧಿಕಾರಿಗಳು ಮತ್ತೂಂದು ನೋಟಿಸ್ ನೀಡಿ, ಆಗಸ್ಟ್ 19 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕಳುಹಿಸಿದ್ದಾರೆ.