ಕಾನೂನು ಬಾಹಿರ ಡಿ ನೋಟಿಫಿಕೇಶನ್ ಸಂಬಂಧ ತಮ್ಮ ವಿರುದ್ಧದ ಎಫ್ ಐಆರ್ ಅನ್ನು ವಜಾಗೊಳಿಸಬೇಕೆಂದು ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್, ಎಸಿಬಿ ಮತ್ತು ದೂರುದಾರ ಖಾಸಗಿ ವಿವಿಯ ಮಾಜಿ ಉಪ ಕುಲಪತಿ ಡಾ.ಅಯ್ಯಪ್ಪ ಅವರಿಗೆ ನೊಟೀಸ್ ನೀಡಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.