ಬೆಳಗ್ಗೆ 7 ಗಂಟೆಗೆ ಅಪ್ಪಾಜಿ ಕ್ಯಾಂಟೀನ್ ಮುಂದೆ ಜನ ಸಾಲುಗಟ್ಟಿ ನಿಂತಿರುತ್ತಾರೆ, ನಂತರ 7.30 ಕ್ಕೆ ಕ್ಯಾಂಟೀನ್ ಆರಂಭವಾಗುತ್ತದೆ. ಶ್ರೀನಗರದ 50 ಅಡಿ ರಸ್ತೆಯಲ್ಲಿ ಪ್ರಮುಖವಾಗಿ ಆಟೋ ಡ್ರೈವರ್, ಸೇಲ್ಸ್ ಎಕ್ಸಿ ಕ್ಯೂಟಿವ್ಸ ಮತ್ತು ದಿನಗೂಲಿ ನೌಕರರು, ಸಾಲುಗಟ್ಟಿ ನಿಂತಿರುತ್ತಾರೆ. ಇದರಿಂದ ಕೆಲವೊಮ್ಮ ಟ್ರಾಫಿಕ್ ಸಮಸ್ಯೆ ಉಂಟಾಗುತ್ತದೆ, ಬೆಳಗ್ಗೆ 7.30 ರಿಂದ 9 ಗಂಟೆವರೆಗೆ ಉಪಹಾರ, ಮಧ್ಯಾಹ್ನ 1ರಿಂದ ಮೂರುಗಂಟೆ ವರೆಗೆ ಊಟ ಇರುತ್ತದೆ, ಇಲ್ಲಿನ ಆಹಾರ ಗುಣಮಟ್ಟ ಚೆನ್ನಾಗಿರುತ್ತದೆ. ಹೀಗಾಗಿ ಕಾಯುವುದರಿಂದ ಯಾವುದೇ ಸಮಸ್ಯೆಯಿಲ್ಲ ಎಂದು ಆಟೋ ಚಾಲಕ ರಾಜೇಶ್ ಅಭಿಪ್ರಾಯ.