ಮೈಸೂರು ದಸರಾ: ಸುಸೂತ್ರವಾಗಿ ನಡೆಸಲು ಸಚಿವೆ ಉಮಾಶ್ರೀ ಅಧಿಕಾರಿಗಳಿಗೆ ಸೂಚನೆ

ಈ ಬಾರಿಯ ಮೈಸೂರು ದಸರಾದಲ್ಲಿ ಕಾರ್ಯಕ್ರಮಗಳನ್ನು ಯಾವುದೇ ಗೊಂದಲಗಳಿಲ್ಲದೆ ....
ಮೈಸೂರು ದಸರಾ ಕುರಿತು ನಿನ್ನೆ ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವೆ ಉಮಾಶ್ರೀ
ಮೈಸೂರು ದಸರಾ ಕುರಿತು ನಿನ್ನೆ ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವೆ ಉಮಾಶ್ರೀ
ಬೆಂಗಳೂರು: ಈ ಬಾರಿಯ ಮೈಸೂರು ದಸರಾದಲ್ಲಿ ಕಾರ್ಯಕ್ರಮಗಳನ್ನು ಯಾವುದೇ ಗೊಂದಲಗಳಿಲ್ಲದೆ ಸುಸೂತ್ರವಾಗಿ ನಡೆಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಸಚಿವೆ ಉಮಾಶ್ರೀ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ದಸರಾ ಸಾಂಸ್ಕೃತಿಕ ಮತ್ತು ಮೆರವಣಿಗೆ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೈಸೂರು ದಸರಾ ರಾಷ್ಟ್ರಮಟ್ಟದಲ್ಲಿ ಹೆಸರಾಗಿದ್ದು, ಉತ್ತಮ ಕಲಾವಿದರಿಂದ ಕಾರ್ಯಕ್ರಮಗಳನ್ನು ಏರ್ಪಡಿಸುವಂತೆ ಸಮಿತಿಗೆ ತಿಳಿಸಲಾಗಿದೆ ಎಂದರು.
ಮೈಸೂರಿನ 6 ವಿವಿಧ ಸ್ಥಳಗಳಲ್ಲಿ 201 ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ವಿವಿಧ ರಾಜ್ಯಗಳ ಉತ್ತಮ ಕಲಾವಿದರನ್ನು ಪರಿಚಯಿಸಿ, ವೈವಿಧ್ಯಮಯ ಕಾರ್ಯಕ್ರಮ ನೀಡುವಂತೆ ಸೂಚಿಸಲಾಗಿದೆ ಎಂದು ಉಮಾಶ್ರೀ ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com