ವಿಜ್ಞಾನಿಗಳ ತಂಡ ವರದಿಯನ್ನು ನಗರಾಭಿವೃದ್ಧಿ ಸಚಿವ ರೋಶನ್ ಬೇಗ್ ಅವರಿಗೆ ಸಲ್ಲಿಸಿದೆ. ಮಂಗಳೂರಿನಲ್ಲಿರುವ ನದಿಗಳಿಗೆ ಜಲಾಶಯಗಳನ್ನು ನಿರ್ಮಿಸಿದರೆ ಅದನ್ನು ಶುದ್ಧೀಕರಿಸಿ ಬೆಂಗಳೂರಿಗೆ ನೀರು ಪೂರೈಕೆ ಮಾಡಬಹುದು. ಪ್ರತಿ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನದಿಗಳಿಂದ ಸುಮಾರು 240 ಟಿಎಂಸಿ ನೀರು ಸಮುದ್ರಕ್ಕೆ ಹರಿದು ಹೋಗುತ್ತದೆ.