ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿದ ಕಲ್ಬುರ್ಗಿಯವರ ಪುತ್ರ ಶ್ರೀವಿಜಯ್, ನನಗೆ ಸರ್ಕಾರ ಮತ್ತು ನ್ಯಾಯದ ಮೇಲೆ ನಂಬಿಕೆ, ಗೌರವ ಇದೆ. ಆದರೆ ಕೇಸಿನ ವಿಚಾರಣೆಯಲ್ಲಿ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ವಿಳಂಬ ತೋರಿರುವುದು ನಿರಾಶೆ ಉಂಟು ಮಾಡಿದೆ. ನಮಗೆ ನ್ಯಾಯ ಸಿಗಲು ಕಾನೂನಿನ ಬೇರೆ ದಾರಿ ಹುಡುಕಬೇಕಾಗಿದೆ ಎಂದರು.