ವಿವಿಧ ಪಕ್ಷಗಳ ನಾಯಕರು, ಬರಹಗಾರರು, ಕಾರ್ಯಕರ್ತರು ಮತ್ತು ತಜ್ಞರು ಪ್ರತ್ಯೇಕ ನಾಡಧ್ವಜ ಪ್ರಸ್ತಾವನೆಗೆ ವಿರೋಧ ವ್ಯಕ್ತ ಪಡಿಸಿದ್ದರು. ಒಂದೇ ರಾಷ್ಟ್ರ ಒಂದೇ ಧ್ವಜ ತತ್ವದಲ್ಲಿ ನಂಬಿಕೆ ಇಟ್ಟಿರುವುದಾಗಿ ಹೇಳಿದ್ದರು, ಇನ್ನೂ ಅಧಿಕಾರಿಗಳಿಗೆ ಈ ವಿಷಯವನ್ನು ಹೇಗೆ ಮುಂದುವರಿಸಿಕೊಂಡು ಹೋಗಬೇಕು ಎಂಬುದು ತಿಳಿದಿಲ್ಲ, ರಾಜ್ಯ ಸರ್ಕಾರ ಈ ಬಗ್ಗೆ ಮೊದಲಿನಷ್ಠು ಆಸಕ್ತಿ ತೋರುತ್ತಿಲ್ಲ, ಹೀಗಾಗಿ ಈ ಯೋಜನೆ ಕೈ ಬಿಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.