ಪ್ರಸ್ತುತ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಎದ್ದಿರುವ ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತಂತೆ ದೀಪಕ್ ಮಿಶ್ರಾ, ಎ.ಎಂ. ಖನ್ವೀಲ್ಕರ್ ಹಾಗೂ ಅಮಿತವರಾಯ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ವಿಚಾರಣೆ ನಡೆಸುತ್ತಿದೆ. ಮುಂದಿನ ವಾರ ಕಾವೇರಿ ವಿವಾದದ ವಿಚಾರಣೆ ಅಂತ್ಯಗೊಳ್ಳಲಿದ್ದು. ಬಳಿಕ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳು ನಿತ್ಯಾನಂದರನ ಮೇಲೆ ದಾಖಲಾಗಿರುವ ಅತ್ಯಾಚಾರ ಪ್ರಕರಣಗಳನ್ನು ವಿಚಾರಣೆ ನಡೆಸಲಿದೆ.