ಶೌಚಾಲಯ ನಿರ್ಮಾಣಕ್ಕೆ ವಿರೋಧ; ದಾವಣಗೆರೆ ಮಹಿಳೆ ಆತ್ಮಹತ್ಯೆ: ಸಿದ್ದರಾಮಯ್ಯಗೆ ಕುಮಾರಸ್ವಾಮಿ ಟ್ವೀಟ್

ಶೌಚಾಲಯ ನಿರ್ಮಾಣ ವಿಚಾರಕ್ಕೆ ದಾವಣಗೆರೆಯಲ್ಲಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಮಾಜಿ ಮುಖ್ಯಮಂತ್ರಿ ....
ಶೌಚಾಲಯ ನಿರ್ಮಾಣಕ್ಕೆ ವಿರೋಧ; ದಾವಣಗೆರೆ ಮಹಿಳೆ ಆತ್ಮಹತ್ಯೆ: ಸಿದ್ದರಾಮಯ್ಯಗೆ ಕುಮಾರಸ್ವಾಮಿ ಟ್ವೀಟ್
ಶೌಚಾಲಯ ನಿರ್ಮಾಣಕ್ಕೆ ವಿರೋಧ; ದಾವಣಗೆರೆ ಮಹಿಳೆ ಆತ್ಮಹತ್ಯೆ: ಸಿದ್ದರಾಮಯ್ಯಗೆ ಕುಮಾರಸ್ವಾಮಿ ಟ್ವೀಟ್
Updated on
ದಾವಣಗೆರೆ: ಶೌಚಾಲಯ ನಿರ್ಮಾಣ ವಿಚಾರಕ್ಕೆ ದಾವಣಗೆರೆಯಲ್ಲಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟ್ವೀಟ್ ಮಾಡಿದ್ದಾರೆ
ದಾವಣಗೆರೆಯ ಹರಪನಹಳ್ಳಿಯಲ್ಲಿ ಶೌಚಾಲಯ ನಿರ್ಮಾಣ ವಿಚಾರಕ್ಕೆ ಸಂಬಂಧ ನಡೆದ ಜಗಳದಲ್ಲಿ ಅನ್ನಪೂರ್ಣ ಎನ್ನುವ ಮಹಿಳೆ ಸೀಮೀಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದರ ಸಂಬಂಧ ಮುಖ್ಯಮಂತ್ರಿಗಳಿಗೆ ಟ್ವಿಟ್ಟರ್ ಸಂದೇಶ ಕಳಿಸಿರುವ ಕುಮಾರಸ್ವಾಮಿ ಸ್ವಚ್ಛ ಭಾರತ ಯೋಜನೆ ಅನುಷ್ಟಾನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಕಷ್ಟು ಆಸಕ್ತಿ ವಹಿಸಿಯೂ ಕೆಲವೊಮ್ಮೆ ಲೋಪವು ಕಂಡುಬರುತ್ತಿದೆ.ಇದಕ್ಕೆ ಈ ಪ್ರಕರಣ ಒಂದು ಉದಾಹರಣೆ ಎಂದಿದ್ದಾರೆ.
ಕುಟುಂಬದ ಬಡತನ, ಅಸಹಾಯಕತೆಯನ್ನು ತಮ್ಮ ಲಾಭಕ್ಕೆ ಬಳಸುವ ವ್ಯಕ್ತಿಗಳು ನಾಗರಿಕ ಸಮಾಜದಲ್ಲಿರುವುದು ತಲೆ ತಗ್ಗಿಸುವ ವಿಚಾರ ಎಂದಿರುವ ಕುಮಾರಸ್ವಾಮಿ ಗ್ರಾಮ ಪಂಚಾಯತಿ ಪಿಡಿಒ, ಸದಸ್ಯರು ಸೇರಿ ಆಕೆಯ ಸಾವಿಗೆ ಕಾರಣವಾದ ವ್ಯಕ್ತಿಗಳನ್ನು ಕೂಡಲೇ ಬಂಧಿಸಿ ಎಂದು ಫೇಸ್ ಬುಕ್, ಟ್ವಿಟ್ಟರ್ ಮೂಲಕ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com