ನಗರದ ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರ ಸಭೆಯ ಬಳಿಕ ವರದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಉತ್ತರ ಪ್ರದೇಶದಲ್ಲಿ ನಡೆದ ನಗರಪಾಲಿಕೆ ಚುನಾವಣೆಗಳಲ್ಲಿ ಪಕ್ಷದ ಕಳಪೆ ಸಾಧನೆಗೆ ಎಲೆಕ್ಟ್ರಾನಿಕ್ ಮತದಾನ ಯಂತ್ರಗಳು (ಇವಿಎಂ) ಕಾರಣ ಎಂದರು. ಉತ್ತರ ಪ್ರದೇಶದ ಚುನಾವಣೆಗಳಲ್ಲಿ ಇವಿಎಂಗಳನ್ನು ತಿರುಚಲಾಗಿತ್ತು. ನಾವು ಈ ಹಿಂದೆ ಸಹ ಹಲವಾರು ಸಂದರ್ಭಗಳಲ್ಲಿ ಇವಿಎಂ ದೋಷದ ಕುರಿತಂತೆ ಕಳವಳವನ್ನು ವ್ಯಕ್ತಪಡಿಸಿದ್ದೇವೆ ಎಂದು ಅವರು ಹೇಳಿದರು.ಗುಜರಾತ್ ಚುನಾವಣೆಗಳಲ್ಲಿ ಇ.ವಿ.ಎಂಗಳನ್ನು ತಿರುಚುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಪರಮೇಶ್ವರ್ ಅಮೆರಿಕದ ತಜ್ಞರು ಸಹ ಇದೇ ಅಭಿಪ್ರಾಯ ತಾಳಿದ್ದಾರೆ ಎಂದರು