ಪೊಲೀಸ್ ಠಾಣೆಗಳನ್ನು ಸಾರ್ವಜನಿಕ ಸ್ನೇಹಿಯಾಗಿ ಮಾಡುವ ಉದ್ದೇಶದಿಂದ 'ಜನ ಸ್ನೇಹಿ ಪೊಲೀಸ್ ಯೋಜನೆ' ಅಡಿ ಡಿಸೆಂಬರ್ 31ರೊಳಗೆ ಎಲ್ಲಾ ಪೊಲೀಸ್ ಠಾಣೆಯಲ್ಲಿ ಸ್ವಾಗತ ಕೇಂದ್ರ ಸ್ಥಾಪಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್ ರಾಜು ಅವರು ಆದೇಶ ಹೊರಡಿಸಿದ್ದಾರೆ. ಅಲ್ಲದೆ ಸ್ವಾಗತಕಾರರ ಕೇಂದ್ರ ಸ್ಥಾಪಿಸಿದ ಬಗ್ಗೆ ಫೋಟೋ ಸಮೇತ ವರದಿ ಮಾಡುವಂತೆ ಸೂಚಿಸಿದ್ದಾರೆ.