ಡಿ.2 ರಂದು ಈದ್ ಸಂದರ್ಭ ಗಣೇಶಪೇಟೆಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮೌಲ್ವಿ ಗಣೇಶ ಪೇಟೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದರು. ಗಣ್ಯ ಅಧಿಕಾರಿಗಳೆದುರಲ್ಲೇ ಮೌಲ್ವಿ ಈ ಹೇಳಿಕೆ ನೀಡಿದ್ದು ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಸ್ವತಃ ಎಸಿಪಿ ದಾವೂದ್ ಖಾನ್ ಅವರೇ ಮೌಲ್ವಿ ವಿರುದ್ಧ ಶಾಂತಿ ಭಂಗ ಮತ್ತು ಪ್ರಚೋದನಾತ್ಮಕ ಹೇಳಿಕೆ ಪ್ರಕರಣ ದಾಖಲಿಸಿಕೊಂಡಿದ್ದರು.