ಧಾರವಾಡ: ನನ್ನ ತಂದೆ ಯಾವುದೇ ತಪ್ಪು ಮಾಡಿಲ್ಲ. ಅವರು ನಿರಾಪರಾಧಿಯಾಗಿದ್ದು, ಶೀಘ್ರದಲ್ಲೇ ಅವರಿಗೆ ಕ್ಲೀನ್ ಚಿಟ್ ದೊರೆಯುತ್ತದೆ ಎಂದು ಸಹೋದ್ಯೋಗಿ ಹತ್ಯೆಗೆ ಸುಪಾರಿ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಖ್ಯಾತ ಪತ್ರಕರ್ತ ಹಾಗೂ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಅವರ ಪುತ್ರಿ ಭಾವನಾ ಬೆಳಗೆರೆ ಅವರು ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.