ಐಟಿ ಇಲಾಖೆ ಮುಂದೆ ಹಾಜರಾದ ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬದವರು
ರಾಜ್ಯ
ಬೇನಾಮಿ ಮೂಲಕ 5 ಎಕ್ರೆ ಜಮೀನನ್ನು ಸಚಿವ ಡಿಕೆಶಿ ಖರೀದಿಸಲು ಯತ್ನಿಸಿದ್ದರು: ಐಟಿ ಇಲಾಖೆ ಅಧಿಕಾರಿಗಳು
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಕಳೆದ ಜೂನ್ ತಿಂಗಳಲ್ಲಿ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ ...
ಬೆಂಗಳೂರು: ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಕಳೆದ ಜೂನ್ ತಿಂಗಳಲ್ಲಿ ಬೆಂಗಳೂರಿನ ಅರಮನೆ ಮೈದಾನದ ಒಂದು ಭಾಗದ 5 ಎಕರೆ ಭೂಮಿಯನ್ನು ಖರೀದಿಸಲು ಒಪ್ಪಂದ ಮಾಡಿಕೊಂಡಿದ್ದರು ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿದ ವೇಳೆ ಬಹಿರಂಗವಾಗಿದೆ.
ಈ ಒಪ್ಪಂದದ ಸಲುವಾಗಿ ಡಿ.ಕೆ.ಶಿವಕುಮಾರ್ ಇಬ್ಬರು ವ್ಯಕ್ತಿಗಳನ್ನು ಬಳಸಿಕೊಂಡಿದ್ದು ಅವರಲ್ಲಿ ಒಬ್ಬರು ಅವರ ಸ್ನೇಹಿತರಾಗಿದ್ದಾರೆ. ಮೈಸೂರು ರಾಜಮನೆತನದ ಸದಸ್ಯೆ ವಿಶಾಲಾಕ್ಷಿ ದೇವಿಗೆ ಸೇರಿದ್ದು ಎನ್ನಲಾದ ವಿವಾದಿತ ಭೂಮಿಯ ಒಂದು ಭಾಗವನ್ನು ಖರೀದಿಸಲು ಒಪ್ಪಂದವೇರ್ಪಟ್ಟಿತ್ತು. ಇದಕ್ಕೆ 5 ಕೋಟಿ ಆಗಲೇ ಸಂದಾಯ ಮಾಡಲಾಗಿತ್ತು ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ ಭೂಮಿಯನ್ನು ಯಾವುದೇ ಕಾರಣಕ್ಕೂ ಮಾರಾಟ ಮಾಡದಂತೆ ಮೈಸೂರು ರಾಜಮನೆತನಕ್ಕೆ ತಡೆಯನ್ನು ತಂದಿತ್ತು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ