ಬೆಂಗಳೂರಿನ ಸಿಸಿಬಿ ಕಚೇರಿಯಿಂದಲೇ ರವಿ ಬೆಳಗೆರೆ ಅವರ 2ನೇ ಪತ್ನಿ ಯಶೋಮತಿ ಅವರನ್ನು ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದು, ಪ್ರಕರಣ ಸಂಬಂಧ ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಈ ವೇಳೆ ಯಶೋಮತಿ ಅವರು ಸುನಿಲ್ ಹೆಗ್ಗರವಳ್ಳಿ ಕುರಿತಂತೆ ಕೆಲ ಹೇಳಿಕೆಗಳನ್ನು ನೀಡಿದ್ದು, ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ಸುನಿಲ್ ಹಿರಿಯ ಸಂಪಾದಕರಾಗಿದ್ದರು. ನಾನು ಪತ್ರಿಕೆಯ ಎಂಡಿ ಆಗಿದ್ದೆ. ನಮ್ಮ ಕೆಲಸದ ಕುರಿತಾಗಿ ಮಾತ್ರ ನಾವು ಆಗಾಗ ಚರ್ಚೆ ನಡೆಸುತ್ತಿದ್ದೆವು. ಇದನ್ನು ಹೊರತು ಪಡಿಸಿ ವೈಯುಕ್ತಿಕವಾದ ಚರ್ಚೆಗಳನ್ನು ನಾವು ಮಾಡುತ್ತಿರಲಿಲ್ಲ ಎಂದು ಯಶೋಮತಿ ಹೇಳಿದ್ದಾರೆ.