ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಸಿಬಿ ಅಧಿಕಾರಿಗಳ ಎದುರು ಹೇಳಿಕೆ ನೀಡಿರುವ ಯಶೋಮತಿ ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ಸುನಿಲ್ ಹಿರಿಯ ಸಂಪಾದಕರಾಗಿದ್ದರು. ನಾನು ಪತ್ರಿಕೆಯ ಎಂಡಿ ಆಗಿದ್ದೆ. ನಮ್ಮ ಕೆಲಸದ ಕುರಿತಾಗಿ ಮಾತ್ರ ನಾವು ಆಗಾಗ ಚರ್ಚೆ ನಡೆಸುತ್ತಿದ್ದೆವು. ಇದನ್ನು ಹೊರತು ಪಡಿಸಿ ವೈಯುಕ್ತಿಕವಾದ ಚರ್ಚೆಗಳನ್ನು ನಾವು ಮಾಡುತ್ತಿರಲಿಲ್ಲ ಎಂದು ಯಶೋಮತಿ ಹೇಳಿದ್ದಾರೆ. ಈ ಬೆನ್ನಲ್ಲೇ ಫೇಸ್ ಬುಕ್ ನಲ್ಲಿ ಸ್ಟೇಟಸ್ ಅಪ್ ಡೇಟ್ ಮಾಡಿರುವ ಯಶೋಮತಿ “ಏನೂ ಯೋಚನೆ ಮಾಡಬೇಡ ನಂಗೇನೂ ಆಗಲ್ಲ” ಅಂತ ಚೆಲ್ಲಿ ಹೋದ ರವಿಯ ನಗುವೇ ಮನೆ ಮನ ತುಂಬಿದೆ. ಅದೇ ನಿರೀಕ್ಷೆಯಲ್ಲಿದ್ದೇವೆ ನಾನು ಹಿಮ. ನಿಮಗೇನೂ ಆಗಲ್ಲ ವೀ. ನಮ್ಮೆಲ್ಲರ ಪ್ರಾರ್ಥನೆ ಸದಾ ನಿಮ್ಮೊಂದಿಗಿದೆ. ಇದೊಂದು ಸಣ್ಣ ಪರೀಕ್ಷೆ ಅಷ್ಟೆ. ಅದರಲ್ಲಿ ಗೆದ್ದು ಬರುವಿರೆಂಬ ನಂಬಿಕೆ ನನಗಿದೆ" ಎಂದು ಬರೆದಿದ್ದಾರೆ.