ಏಳು ವರ್ಷಗಳ ಹಿಂದೆ ಬೆಳಗೆರೆ ವಿರುದ್ಧ ದಾಖಲಾಗಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಇದೀಗ ಅರೆಸ್ಟ್ ವಾರಂಟ್ ಅನ್ನು ಜಾರಿ ಮಾಡಿದ್ದು, 'ಹಾಯ್ ಬೆಂಗಳೂರು' ಪತ್ರಿಕೆಯಲ್ಲಿ 7 ವರ್ಷಗಳ ಹಿಂದೆ ಮಹಿಳೆಯೊಬ್ಬರ ಬಗ್ಗೆ ವರದಿಯೊಂದು ಪ್ರಕಟವಾಗಿತ್ತು. ಈ ವರದಿಯಿಂದಾಗಿ ತಮ್ಮ ತೇಜೋವಧೆಯಾಗಿದೆ. ತಮ್ಮ ತೇಜೋವಧೆ ಮಾಡಲೆಂದೇ ವರದಿ ಪ್ರಕಟಿಸಲಾಗಿದೆ ಎಂದು ಆರೋಪಿಸಿ ಮಹಿಳೆ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್ ಸಾಕಷ್ಟು ಬಾರಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತಾದರೂ, ಬೆಳಗೆರೆಯವರು ಸಬೂಬು ಹೇಳಿ ಪ್ರತಿ ಬಾರಿಯೂ ಕೋರ್ಟ್ ವಿಚಾರಣೆಗೆ ಗೈರು ಹಾಜರಾಗಿದ್ದರು.